ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

85

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…