ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…