News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

86

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.