News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

92

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.