ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು



ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…