ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು



ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…