News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

350

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…