ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು



ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…