News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

106

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…