ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

87

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…