ಸುದ್ದಿ

ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

41

ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

http://www.dreamstime.com/royalty-free-stock-images-top-computer-companies-world-kiev-ukraine-may-logotype-collection-well-known-technologies-monitor-screen-image41023829

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸಂಬಂಧ

    ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಉಪಯುಕ್ತ ಮಾಹಿತಿ

    ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ..!ಹೇಗೆ ಎಂದು ತಿಳಿಯಲು ಇದನ್ನು ಓದಿ ..

    ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.