News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಉಪಯುಕ್ತ ಮಾಹಿತಿ

ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

579

ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್‌ಕಾಯಿನ್‌ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್‌ ವ್ಯಾಲೆಟ್‌ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ

 ಏನಿದು ಬಿಟ್‌ಕಾಯಿನ್?

ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್‌ನೆಟ್ ಮೂಲಕ ನಡೆಯುತ್ತದೆ. ಬಿಟ್‌ಕಾಯಿನ್‌ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.

ಬಿಟ್‌ಕಾಯಿನ್ ಸೃಷ್ಟಿಕರ್ತ ಯಾರು..?

ಬಿಟ್‌ಕಾಯಿನ್‌ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್‌ಕಾಯಿನ್‌ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್‌ಕಾಯಿನ್‌ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್‌ಕಾಯಿನ್‌ ಅನ್ನು ಯಾವುದೇ ಬ್ಯಾಂಕ್‌ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್‌ಕಾಯಿನ್‌ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್‌ಕಾಯಿನ್‌ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.

ಈ ಬಿಟ್‌ಕಾಯಿನ್‌ ಅನ್ನು ಸಂಪಾದಿಸುವುದು ಹೇಗೆ..?

ಬಿಟ್‌ಕಾಯಿನ್‌ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ  ಬಿಟ್‌ಕಾಯಿನ್‌ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್‌ಕಾಯಿನ್‌ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್‌ಕಾಯಿನ್‌ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್‌ಕಾಯಿನ್‌ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್‌ ಎಂದೇ ಹೆಸರು. ಈಚೆಗೆ ಬಿಟ್‌ಕಾಯಿನ್‌ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್‌ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.

ಷೇರು ಮಾರುಕಟ್ಟೆ ಜೂಜು..!

ಇತ್ತೀಚೆಗೆ ಒಂದು ಬಿಟ್‌ಕಾಯಿನ್‌ನ ಬೆಲೆ 10,000 ಡಾಲರ್‌ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!

ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…

  • 1. ಬೇರೆಲ್ಲಾ ಮಾಧ್ಯಮಗಳಿಗಿಂತ ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಹಣ ವರ್ಗಾವಣೆ ಸಾಧ್ಯ. ಶುಲ್ಕವೂ ಅತೀ ಕಡಿಮೆ.
  • 2. ಯಾವುದೇ ಕ್ರೆಡಿಟ್ ಕಾರ್ಡ್ ಇಲ್ಲದೆಯೂ ಬಿಟ್ ಕಾಯಿನ್‍ಗಳನ್ನು  ನೀವು ಹೊಂದಬಹುದು, ಅವುಗಳನ್ನು  ಇನ್ನೊಬ್ಬರಿಗೆ ವರ್ಗಾಯಿಸಬಹುದು.
  • 3. ಬಿಟ್ ಕಾಯಿನ್ ಮೂಲಕ ಒಮ್ಮೆ ಮಾಡಿದ  ಪಾವತಿಯನ್ನು ರದ್ದು ಮಾಡಲು ಆಗುವುದಿಲ್ಲ.
  • 4. ಇತರೆ ಹಣಕಾಸು ವಹಿವಾಟುಗಳ ಹೋಲಿಕೆಯಲ್ಲಿ ಬಿಟ್ ಕಾಯಿನ್  ಅಷ್ಟು ಸುಲಭವಾಗಿ  ಪತ್ತೆ ಮಾಡಲಾಗುವುದಿಲ್ಲ. ಯಾರ ನಿಯಂತ್ರಣವೂ ಇಲ್ಲದ ಕಾರಣ ಸರಕಾರದ ಅಥವಾ ಹಣಕಾಸು  ಇಲಾಖೆಯ ಗಮನಕ್ಕೆ ಬಾರದೇ ಮೊತ್ತ ವರ್ಗಾವಣೆ ಮಾಡಬಹುದು.ಹೀಗಾಗಿ ಬೇನಾಮಿ ಹಣಪಾವತಿಗಳು, ಹವಾಲಾಗಳು ಈ ಮಾಧ್ಯಮದಿಂದ ನಡೆಯುವ ಸಾಧ್ಯತೆಯೂ ಇದೆ.

 

 

 ಬಿಟ್‌ಕಾಯಿನ್‌ ‘ನ ಪ್ರಮುಖ ಉಪಯೋಗಗಳೇನು..?

ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್‌ಪ್ರೆಸ್, ರೆಡಿಟ್, ನೇಮ್‌ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್‌ಲೈನ್ ತಾಣಗಳು ಬಿಟ್‌ಕಾಯಿನ್‌ಗಳನ್ನು ನೇರವಾಗಿ ಸ್ವೀಕರಿಸುತ್ತವೆ.

ಇದರಿಂದ ಆಗುವ ಅಪಾಯಗಳೇನು..?

ಬಿಟ್‌ಕಾಯಿನ್‌ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್‌ಕಾಯಿನ್‌ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.

ಅಂತರಜಾಲದಲ್ಲೇ  ಬಿಟ್‌ಕಾಯಿನ್‌ಗಳನ್ನು ಕದಿಯುತ್ತಾರೆ..!

ಈಗ ಬೇರೊಬ್ಬರ ಬಿಟ್‌ಕಾಯಿನ್‌ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್‌ಕಾಯಿನ್‌ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್‌ಕಾಯಿನ್‌ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್‌ಕಾಯಿನ್‌ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.

ಭಾರತದಲ್ಲಿ ಕಾನೂನುಬದ್ಧವೇ..?

ಈ ಡಿಜಿಟಲ್‌ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್‌ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್‌ಕಾಯಿನ್‌ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್‌ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್‌ಕಾಯಿನ್‌ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.

ಬಿಟ್‌ಕಾಯಿನ್ ಸುರಕ್ಷಿತವೇ..?

ಸದ್ಯ ಬಿಟ್‌ಕಾಯಿನ್‌ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್‌ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್‌ಕಾಯಿನ್‌ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.