ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….
*ದುಬಾರಿಯಾಗಲಿರುವ ಸೇವೆಗಳು:-
ನೋಟ್ ಬ್ಯಾನ್ ಆದ ನಂತರ ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್ಗಳು ಈಗ ಜಿಎಸ್ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.
ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ 4 ಬಾರಿ ಎಟಿಎಂ ವಿತ್ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್ಡ್ರಾಗೂ ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.
ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ
ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ ಹೆಚ್ಚಳವಾಗಲಿದೆ.
ರೈತರನ್ನು ಬಿಡದ ಜಿಎಸ್ಟಿ:-
ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.
ಆಭರಣ ಪ್ರಿಯರಿಗೆ ತೆರಿಗೆ :-
ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ ಜಿಎಸ್ಟಿ ತೆರಿಗೆ ಬೀಳಲಿದೆ.
ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-
ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್ಸ್ಕ್ರೀನ್ ಮೇಲೆ ಜಿಎಸ್ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್ಕಿನ್ಸ್ ಮೇಲೆ ಕೂಡ ಜಿಎಸ್ಟಿ ತೆರಿಗೆ ಹೆಚ್ಚಲಿದೆ.
ಜಿಎಸ್ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…
ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.
ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..
ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ ಜಿಎಸ್ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.
ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ

ಜಿಎಸ್ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.
ಆನ್ಲೈನ್ ಬುಕ್ಕಿಂಗ್ ಮತ್ತು ವ್ಯವಹಾರದ ಮೇಲೆ ಜಿಎಸ್ಟಿ ಬರೆ
ಜುಲೈ 1 ರಾ ನಂತರ ಆನ್ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.
ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-
ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.
ಕನಸಿನ ಮನೆ ನಿರ್ಮಾಣ ಕಷ್ಟ :-
ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.