ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2036

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…