modi, ಮನೆ

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

358

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….

ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ.  ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.


ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.


ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…