ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ

ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.

ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.