ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…