ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…