ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2770

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…