ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2770

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…