News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2781

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…