ಸ್ಪೂರ್ತಿ

ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

174

7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

ವರದಿಗಳ ಪ್ರಕಾರ ಬಾಲಕನ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ತಾಯಿ ಪುಟ್ಟ ಮಗನನ್ನು ಒಂಟಿಯಾಗಿ ಬಿಟ್ಟು ಹೋಗಿ ಬೇರೊಂದು ಮದುವೆಯಾಗಿದ್ದಾಳೆ. ನಂತರ ಬಾಲಕ ತನ್ನ ತಂದೆಯ ಮಾಜಿ ಸಹೋದ್ಯೋಗಿಯ ಬಳಿ ಬೆಳೆದಿದ್ದಾನೆ. ಅವರನ್ನ ಈತ ಅಂಕಲ್ ಅಂತಾ ಕರೀತಾನೆ. ಮೊದಮೊದಲು ತನ್ನ ಅಂಕಲ್‍ಗೆ ಪ್ಯಾಕೇಜ್‍ಗಳನ್ನ ಡೆಲಿವರಿ ಮಾಡಲು ಸಹಾಯ ಮಾಡುತ್ತಿದ್ದ.

ಆದ್ರೆ ನಂತರ ತನ್ನ ಕೆಲಸದ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದು, ತಾನಾಗೇ ಪ್ಯಾಕೇಜ್‍ಗಳನ್ನ ಡೆಲಿವರಿ ಮಾಡುತ್ತಾನೆ. ಒಂದು ದಿನಕ್ಕೆ 30 ಪ್ಯಾಕೇಜ್‍ಗಳನ್ನ ತಲುಪಿಸುತ್ತಾನೆ. ಹಾಗೇ ಈತ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗಿದ್ದು, ಜನ ಈ ಬಾಲಕನನ್ನ ಮಿನಿ ಸೆಲೆಬ್ರಿಟಿ ಅಂತ ಕರೀತಾರೆ. ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ವಾಂಗ್ ಕಿಂಗ್ವೀ ಎಂಬವರು ಬಾಲಕನ ಫೋಟೋ ಹಂಚಿಕೊಂಡ ನಂತರ ಚಾಂಗ್ ನ ಕಥೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪುಟ್ಟ ಬಾಲಕ ಸ್ವಲ್ಪ ಕಷ್ಟ ಪಡುತ್ತಾ ನನಗೆ ಪ್ಯಾಕೇಜ್ ಡೆಲಿವರಿ ಮಾಡೋದನ್ನ ಕಂಡು ಆಶ್ಚರ್ಯವಾಯ್ತು ಎಂದು ಅವರು ಬರೆದುಕೊಂಡಿದ್ದಾರೆ.ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ಬಾಲಕನ ಬಗ್ಗೆ ಸುದ್ದಿ ವರದಿಯಾದ ಬಳಿಕ ಸ್ಥಳೀಯ ಅಧಿಕಾರಿಗಳು ಆತನನ್ನು ವೆಲ್‍ಫೇರ್ ಅಸೋಸಿಯೇಷನ್‍ಗೆ ಕಳಿಸಿದ್ದು, ಬಾಲಕ ಅಲ್ಲಿ ತನ್ನ 7ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾನೆ. ಬಾಲಕನ ತಾಯಿಗಾಗಿ ಕೂಡ ಹುಡುಕಾಟ ನಡೆಸಲಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…