ಸುದ್ದಿ

ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

284

ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….