ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.