ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.