ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ…

ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ ಅನಧಿಕೃತ ಪ್ರವೇಶವನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮವನ್ನು ಜಾರಿಗೆ ತಂದಿರುವುದಾಗಿ ಇಲಾಖೆ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಇಲಾಖೆಯ ಸೂಪರಿಂಟೆಂಟ್ ಬಸಂತ್ ಕುಮಾರ್ ಅವರು, ತಾಜ್ ಮಹಲ್ ನಲ್ಲಿ ಈ ಹಿಂದೆ ಪ್ರವಾಸಿಗರು ಬೆಳಗ್ಗಿನಿಂದ ಸಂಜೆಯವರೆಗೂ ಸಮಯ ಕಳೆಯಬಹುದಿತ್ತು. ಆದರೆ ಈ ವೇಳೆ ತಾಜ್ ಮಹಲ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತಿತ್ತು. ಅಲ್ಲದೆ ಅನಧಿಕೃತವಾಗಿ ಪ್ರವೇಶದ ಅವಕಾಶವೂ ಇತ್ತು. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆತರಲಾಗಿದೆ. ಹೊಸ ನಿಯಮದ ಅನ್ವಯ ಪ್ರವಾಸಿಗರು ತಾಜ್ ಮಹಲ್ ನಲ್ಲಿ 3 ಗಂಟೆಗಳನ್ನು ಮಾತ್ರ ಕಳೆಯಬಹುದು. 3 ಗಂಟೆಗೂ ಅಧಿಕ ಸಮಯದ ಬಳಿಕ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಟರ್ನ್ ಸ್ಟೈಲ್ ಗೇಟ್ ಗಳನ್ನು ಪರಿಚಯಿಲಾಗುತ್ತಿದ್ದು, ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಇವುಗಳನ್ನು ಅಳವಡಿಸಲಾಗುತ್ತದೆ. 7 ಗೇಟ್ ಗಳ ಪೈಕಿ 5 ಗೇಟ್ ಗಳು ಎಕ್ಸಿಟ್ ಗೆ ಮೀಸಲಿಡಲಾಗುತ್ತದೆ. ವಿದೇಶಿಗರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ಗಳು ಇರಲಿದ್ದು, ಟೋಕನ್ ಗಳ ಮೂಲಕವಷ್ಟೇ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ನಿಯಮಕ್ಕೆ ಪ್ರವಾಸಿಗರ ತೀವ್ರ ವಿರೋಧ , ಇನ್ನು ಪುರಾತತ್ವ ಇಲಾಖೆಯ ಹೊಸ ನಿಯಮಕ್ಕೆ ಪ್ರವಾಸಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ನಾವು ತಾಜ್ ಮಹಲ್ ಸಮಯ ಕಳೆಯಲು ಬರುತ್ತೇವೆ. ಆದರೆ ಪುರಾತತ್ವ ಇಲಾಖೆಯ ಈ ನಿಯಮಗಳಿಂದ ಪ್ರವಾಸಿಗರು ತಾಜ್ ಮಹಲ್ ನಿಂದ ವಿಮುಖರಾಗುವ ಅಪಾಯವಿದೆ. ಕೇವಲ ಮೂರು ಗಂಟೆ ಮಾತ್ರ ಸಮಯಾವಕಾಶ ವಿಧಿಸಿದರೆ ತಾಜ್ ಮಹಲ್ ಗೆ ಆಗಮಿಸಲೂ ಕೂಡ ಪ್ರವಾಸಿಗರು ಎರಡೆರಡು ಬಾರಿ ಯೋಚಿಸುತ್ತಾರೆ. ಇದು ನಿಜಕ್ಕೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಅಸ್ಟ್ರೇಲಿಯಾ ಮೂಲದ ಸೆಲಿನಾ ಎಂಬ ಪ್ರವಾಸಿಗರೂ ಕೂಡ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಭಾರತೀಯ ಪ್ರವಾಸಗರಿಗಿಂತ ವಿದೇಶಗರಿಗೆ ಬಹುತೇಕ 10 ಪಟ್ಟು ಹೆಚ್ಚು ಶುಲ್ಕು ವಿಧಿಸುತ್ತಿದ್ದಾರೆ. ಅದಾಗ್ಯೂ ನಾವು ಇಲ್ಲಿಗೆ ಬರುತ್ತಿದ್ದೇವೆ. ಆದರೆ ಇದೀಗ ಸಮಯದ ಮಿತಿ ವಿಧಿಸಿರುವುದು ನಾವು ಮತ್ತೆ ತಾಜ್ ಮಹಲ್ ಗೆ ಭೇಟಿ ನೀಡಬೇಕೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…