ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ