ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.
ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…