ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.
ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…