ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

123

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…