ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ತ್ರಿವಳಿ ತಲಾಖ್ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.
ಈ ಹಿಂದೆ ತ್ರಿವಳಿ ತಲಾಖ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.
ತ್ರಿವಳಿ ತಲಾಖ್ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…