ಆಧ್ಯಾತ್ಮ

ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

5754

ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.

ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.

ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….

1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.

2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ  :-

ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.

3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-

ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.

4. ಬೇಳೆಯನ್ನುಕೊಳ್ಳಬೇಡಿ:-

ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.


5. ಕಪ್ಪು ಬಣ್ಣದ ಬಟ್ಟೆ:-

ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.

6. ಸಾಸಿವೆ ಕೊಳ್ಳಬಾರದು:-

ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.

7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-

ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…