ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…