ಜೀವನಶೈಲಿ

ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

445

ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳ ಬಗ್ಗೆ :-

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.

ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ  ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.

ಸ್ಟೆರಾಯ್ಡ್ ಆಧಾರಿತ ಕಾಸ್ಮೆಟಿಕ್ಸ್ ಬಳಸಿದ ಪರಿಣಾಮಗಳು :-

ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.

ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.

ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ  ಎನ್ನುತ್ತಾರೆ ಚರ್ಮರೋಗ ತಜ್ಞರು.

ಚರ್ಮರೋಗ ತಜ್ಞರ ಅಭಿಪ್ರಾಯ :- 

ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು.  ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು. 

ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…