ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.