News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

33

ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು  ಸಿನಿಮಾ ಮಲಯಾಳಂಗೆ ಡಬ್​​ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ  ಕುತೂಹಲವನ್ನು  ಉಂಟು ಮಾಡಿದೆ.

ದರ್ಶನ್​ ನಟಿಸಿರುವ  ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್​ ಆಗಿ ಯೂಟ್ಯುಬ್​ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್​ಗೆ
ಮಲಯಾಳಂನಲ್ಲಿಯೂ  ಸಹ  ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ  ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ,  ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ  ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್​ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್​’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್​ ದೇವರಾಜ್​ ಅಭಿನಯದ ‘ಇನ್ಸ್​​ಪೆಕ್ಟರ್​ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…