News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

35

ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು  ಸಿನಿಮಾ ಮಲಯಾಳಂಗೆ ಡಬ್​​ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ  ಕುತೂಹಲವನ್ನು  ಉಂಟು ಮಾಡಿದೆ.

ದರ್ಶನ್​ ನಟಿಸಿರುವ  ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್​ ಆಗಿ ಯೂಟ್ಯುಬ್​ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್​ಗೆ
ಮಲಯಾಳಂನಲ್ಲಿಯೂ  ಸಹ  ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ  ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ,  ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ  ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್​ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್​’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್​ ದೇವರಾಜ್​ ಅಭಿನಯದ ‘ಇನ್ಸ್​​ಪೆಕ್ಟರ್​ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…