ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…