ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.