News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Cinema

ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

166

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್‍ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…