ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…