ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…