ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….