ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…