ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.