ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…