ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…