ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

513

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ

ಮೇಷ:-

ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.

ವೃಷಭ:-

ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ಮಿಥುನ:

ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.

ಕಟಕ :-

ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

 ಸಿಂಹ:

ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ಕನ್ಯಾ :-

ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ತುಲಾ:

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ವೃಶ್ಚಿಕ :-

ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ಧನಸ್ಸು:

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.

ಮಕರ :-

ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ಕುಂಭ:-

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಮೀನ:-

ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…