ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

967

ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

 

ವೃಷಭ:-

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

 

ಮಿಥುನ:

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

 

ಕಟಕ :-

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

 

 ಸಿಂಹ:

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

 

ಕನ್ಯಾ :-

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

 

ತುಲಾ:

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

 

ವೃಶ್ಚಿಕ :-

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

 

ಧನಸ್ಸು:

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ‌, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

 

ಮಕರ :-

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

 

ಕುಂಭ:-

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ಮೀನ:-

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…