ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…